ಪರೇಶ್ ಮೇಸ್ತಾ ಸಾವು ಪ್ರಕರಣ: ಸಂಘಪರಿವಾರ ಕಾರ್ಯಕರ್ತರ ಮೇಲಿನ ಪ್ರಕರಣ ಹಿಂಪಡೆಯಲು ಮನವಿ
ಕಾರವಾರ, ಅ.1: ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೇಸ್ತಾ ಸಾವು ಪ್ರಕರಣದ ವೇಳೆ ನಡೆದ ಹಿಂಸಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದ 2,000ಕ್ಕೂ ಹೆಚ್ಚಿನ ಸಂಘಪರಿವಾರದ ಕಾರ್ಯಕರ್ತರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಕಾರವಾರದ ಶಾಸಕಿ ರೂಪಾಲಿ ನಾಯ್ಕ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
2017ರ ಡಿಸೆಂಬರ್ ತಿಂಗಳಲ್ಲಿ ನಡೆದ ಪರೇಶ್ ಮೇಸ್ತಾ ಸಾವಿನ ಬಳಿಕ ನಡೆದ ಪ್ರತಿಭಟನೆಗಳಲ್ಲಿ ಹೊನ್ನಾವರ ತಾಲೂಕಿನ 2,000ಕ್ಕೂ ಹೆಚ್ಚಿನ ಸಂಘಪರಿವಾರದ ಕಾರ್ಯಕರ್ತರ ಮೇಲೆ 150ಕ್ಕೂ ಅಧಿಕ ಕ್ರಿಮಿನಲ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳನ್ನು ಎದುರಿಸುತ್ತಿರುವ ಕಾರ್ಯಕರ್ತರು ತೀರಾ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಹಿಂಪಡೆಯಬೇಕು ಎಂದು ಮನವಿ ಮಾಡಿದ್ದಾರೆ.
Next Story