ಬೆಳ್ತಂಗಡಿ: ಮೇ 16ರಂದು ಮಾಸಾಶನ ವಿತರಣೆ
ಬೆಳ್ತಂಗಡಿ, ಮೇ 14: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮೇ 16ರಂದು ಸಂಜೆ 4 ಗಂಟೆಗೆ ಯೋಜನೆಯ ಕೇಂದ್ರ ಕಚೇರಿ ಧರ್ಮಶ್ರೀ ಕಟ್ಟಡದಲ್ಲಿ ಮಾಸಾಶನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ವಹಿಸಲಿದ್ದು, ಐಡಿಬಿಐ ಬ್ಯಾಂಕಿನ ಚೇರ್ಮನ್ ಕಿಶೋರ ಖರಾಟ್ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು.
ರಾಷ್ಟ್ರದ ಪ್ರಖ್ಯಾತ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳೂ ಭಾಗವಹಿಸಲಿದ್ದಾರೆ. ಕಿಶೋರ್ ಖರಾಟ್ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಐಡಿಬಿಐ ಬ್ಯಾಂಕ್ ಗ್ರಾಮಾಭಿವೃದ್ಧಿ ಯೋಜನೆಯ ನಿಕಟವರ್ತಿಯಾಗಿದ್ದು, ಯೋಜನೆಯ ವತಿಯಿಂದ ಪ್ರಾಯೋಜಿಸಲಾಗಿರುವ 70,000ಕ್ಕೂ ಮಿಕ್ಕಿದ ಸಂಘಗಳಿಗೆ 950 ಕೋಟಿ ರೂ.ಗೂ ಮಿಕ್ಕಿದ ಆರ್ಥಿಕ ನೆರವನ್ನು ಒದಗಿಸಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ
.
Next Story