ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಕೃಷ್ಣಾಪುರ ನೇಮಕ
ಮಂಗಳೂರು, ಜ.22: ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಕೃಷ್ಣಾಪುರ ನೇಮಕಗೊಂಡಿದ್ದಾರೆ.
ದ.ಕ. ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ ಅಝೀಝ್ ಅವರು, ಬೈಕಂಪಾಡಿ ಮುಹಿಯುದ್ದೀನ್ ಜುಮಾ ಮಸೀದಿ ಮುಸ್ಲಿಂ ಜಮಾಅತ್ನ ಹಾಗೂ ಸುರತ್ಕಲ್ ಹಳೆ ಮಾರುಕಟ್ಟೆ ವ್ಯಾಪಾರಸ್ಥರ ಒಕ್ಕೂಟದ ಮಾಜಿ ಅಧ್ಯಕ್ಷರಾಗಿದ್ದಾರೆ.
ಸಲಹಾ ಸಮಿತಿಯ ಉಪಾಧ್ಯಕ್ಷರಾಗಿ ಎ.ಕೆ.ಜಮಾಲುದ್ದೀನ್, ಟಿ.ಎ.ಶಾನವಾಝ್ ಹಾಗೂ ಸದಸ್ಯರಾಗಿ ಮುತ್ತಲಿಬ್, ಎಂ.ರಝಾಕ್, ಸಂಶುದ್ದೀನ್, ಝುಬೈರ್, ಇಬ್ರಾಹೀಂ, ಮುಹಮ್ಮದ್ ಶರೀಫ್, ಎಂ.ಸಲೀಂ, ಅರ್ಶದ್ ಸಬಹಿ, ಅಬ್ದುಲ್ಲ ಕುಂಞಿ ನೆಲ್ಕಡ್ಕ, ಇಸ್ಮಾಯೀಲ್ ಕಾನವು, ಮುಹಮ್ಮದ್ ಅಶ್ರಫ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story