ಬಸ್ಗಳಿಗೆ ಕಲ್ಲು ತೂರಾಟ: ಆರೋಪಿಯ ಬಂಧನ
ಉಪ್ಪಿನಂಗಡಿ: ಪೌರತ್ವ ಮಸೂದೆಯಲ್ಲಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಅಹಿತಕರ ಘಟನೆಯನ್ನಾಧರಿಸಿ ಜಿಲ್ಲೆಯಾದ್ಯಂತ ಮೂಡಿದ ಭೀತಿಯ ವಾತಾವರಣ ಹಿನ್ನೆಲೆಯಲ್ಲಿ ಕಳೆದ ಡಿ.20ರಂದು ನಿರ್ಮಾಣವಾಗಿದ್ದ ಅಘೋಷಿತ ಬಂದ್ ವೇಳೆ ಬಸ್ಗಳಿಗೆ ಕಲ್ಲೆಸೆದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ತಣ್ಣೀರುಪಂಥ ಗ್ರಾಮದ ಬಾಯತ್ತಾರು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಬಿ. ಮುಹಮ್ಮದ್ ಶಬೀರ್ (19) ಬಂಧಿತ ಆರೋಪಿ. ಈತ ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಪ್ಪೆಟ್ಟಿ ಬಳಿ ಕೆಎಸ್ಸಾರ್ಟಿಸಿ ಬಸ್ಗೆ ಕಲ್ಲೆಸೆದ ಪ್ರಕರಣದ ಆರೋಪಿ. ಡಿ.20ರಂದು ಕುಪ್ಪೆಟ್ಟಿಯ ಬೋವಿನಕಡವು ಎಂಬಲ್ಲಿ ಮೂರು ಕೆಎಸ್ಸಾರ್ಟಿಸಿ ಬಸ್ಗಳಿಗೆ ಕಲ್ಲೆಸೆದು ಹಾನಿ ಮಾಡಲಾಗಿತ್ತು. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Next Story