ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪಸಿಂಹ ನಾಯಕ್ ರಿಗೆ ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ಹಿರಿಯ ವಕೀಲರು ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಪ್ರತಾಪಸಿಂಹ ನಾಯಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಮಂಗಳವಾರ ನಡೆಯಿತು
ಸಮಾರಂಭವನ್ನು ಹಿರಿಯ ವಕೀಲರ ಸಂಘದ ಅಧ್ಯಕ್ಷ ರತ್ಮಾವರ್ಮ ಬುಣ್ಣು ದೀಪ ಬೆಳಗಿಸಿ ಉದ್ಘಾಟಿಸಿದರು. ವಕೀಲರ ಸಂಘದ ವತಿಯಿಂದ ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ಹಾಗೂ ಶ್ರೀಮತಿ ಜ್ಯೋತಿ ಪಿ ನಾಯಕ್ ಇವರನ್ನು ಶಾಲು ಹೊದಿಸಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
ವಕೀಲರಾದ ಧನಂಜಯ ರಾವ್, ಸುಬ್ರಹ್ಮಣ್ಯ ಕುಮಾರ್ ಅಗತ೯ ಅವರು ಪ್ರತಾಪಸಿಂಹ ನಾಯಕರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಎಸ್ ಲೋಬೋ ವಹಿಸಿದ್ದರು. ಈ ಸಂದಭ೯ದಲ್ಲಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಆಯ್ಕೆಯಾದ ಧನಂಜಯ ರಾವ್ ರನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ವಸಂತ ಮರಕಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಕೀಲರ ಸಂಘದ ಕಾರ್ಯದರ್ಶಿ ಶ್ರೀಕೃಷ್ಣ ಶೆಣೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Next Story