ಆ.21: ಮಂಗಳೂರಿನ ವಿವಿಧೆಡೆ ವಿದ್ಯುತ್ ನಿಲುಗಡೆ
ಮಂಗಳೂರು, ಆ.20: ಕದ್ರಿ ಉಪಕೇಂದ್ರದಿಂದ ಹೊರಡುವ ಫೀಡರ್ಗಳಲ್ಲಿ ದುರಸ್ತಿ ಕಾಮಗಾರಿ ಹಮ್ಮಿಕೊಂಡಿದ್ದು, ಆ.21ರಂದು ನಗರದ ವಿವಿಧೆಡೆ ವಿದ್ಯುತ್ ಸರಬರಾಜು ನಿಲುಗಡೆಯಾಗಲಿದೆ.
ನಗರದ 33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಕರಂಗಲ್ಪಾಡಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ನಗರದ ವಿವಿಧೆಡೆ ಆ.21ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ನಗರದ ಪಿವಿಎಸ್, ಕರಂಗಲ್ಪಾಡಿ, ಬಂಟ್ಸ್ ಹಾಸ್ಟೆಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.
Next Story