ಕ್ಯಾಂಪಸ್ ಎಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ನಿಂದ ಸನ್ಮಾನ
ಉಪ್ಪಿನಂಗಡಿ, ಆ. 31: ಕ್ಯಾಂಪಸ್ ಎಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ವತಿಯಿಂದ ಇಲ್ಲಿನ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಎಜುಕೇಶನಲ್ ಕೇರಿಯರ್ ಗೈಡೆನ್ಸ್ ಶಿಬಿರ ನಡೆಯಿತು.
ಲತೀಫ್ ಮಾಸ್ಟರ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ತರೇಬೇತುದಾರರಾಗಿ ಭಾಗವಹಿಸಿದ್ದ ಶಿಕ್ಷಣ ತಜ್ಞ ರಫೀಕ್ ಮಾಸ್ಟರ್ ಆತೂರು ಮಾತನಾಡಿ ವಿದ್ಯಾರ್ಥಿಗಳು ಕೋರ್ಸ್ಗಳನ್ನು ಆಯ್ಕೆ ಮಾಡುವಲ್ಲಿ ಎಡವುತ್ತಾರೆ. ಆದ್ದರಿಂದ ಅವರಿಷ್ಟದ ಕೋರ್ಸ್ಗಳನ್ನು ಆಯ್ಕೆ ಮಾಡಲು ಪೋಷಕರು ಸಹಕರಿಸಬೇಕು. ಸಾಧಿಸಲು ಕುಟುಂಬದ ಹಿನ್ನಲೆ ಕಾರಣವೇ ಅಲ್ಲ ಎಂದರಲ್ಲದೆ, ವಿವಿಧ ವೃತ್ತಿಪರ ಕೋರ್ಸ್ಗಳ ಬಗ್ಗೆ ಮಾತನಡಿದರು.
ಅತಿಥಿಯಾಗಿ ಉಪ್ಪಿನಂಗಡಿ ಠಾಣೆಯ ಎಸ್ಸೈ ಡಿ.ಎನ್. ಹೀರಯ್ಯ, ಶೀ ಕ್ಯಾಂಪಸ್ ಪ್ರಾಧ್ಯಾಪಕ ಎಕೆ ನಂದಾವರ ಭಾಗವಹಿಸಿದ್ದರು. ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯನಾಗಿ ಮೂಡಿಬಂದ ಕೌಶಿಕ್ ರಾವ್ ಸಹಿತ ಪಿಯುಸಿ ಹಾಗೂ ಎಸೆಸೆಲ್ಸಿ ಸುಮಾರು ನೂರು ಮಂದಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಎಸೆಸ್ಸೆಫ್ ಕೋಶಾಧಿಕಾರಿ ಅಲಿ ತುರ್ಕಳಿಕ್ಕೆ, ಉಪ್ಪಿನಂಗಡಿ ಡಿವಿಷನ್ ಅಧ್ಯಕ್ಷ ಮುಹಮ್ಮದ್ ಮಿಸ್ಬಾಹಿ, ಡಿವಿಷನ್ ಪ್ರಧಾನ ಕಾರ್ಯದರ್ಶಿ ಯು.ಪಿ ಮುಸ್ತಫಾ, ಬದ್ರಿಯಾ ಸ್ಕೂಲ್ ಆತೂರು ಅಧ್ಯಕ್ಷ ಪುತ್ತುಂಞಿ, ಹಕೀಂ ಕಳಂಜಿಬೈಲು ಪಾಲ್ಗೊಂಡಿದ್ದರು.
ಕ್ಯಾಂಪಸ್ ಎಸೆಸ್ಸೆಫ್ ಕಾರ್ಯದರ್ಶಿ ಜುನೈದ್ ತುರ್ಕಳಿಕ್ಕೆ ಸ್ವಾಗತಿಸಿದರು. ಎಂ.ಎಂ ಮಹ್ರೂಫ್ ಆತೂರು ವಂದಿಸಿದರು.