ಟೆಂಪೋ-ದ್ವಿಚಕ್ರ ವಾಹನ ಢಿಕ್ಕಿ: ಸವಾರ ಸಾವು
ಮೂಡುಬಿದಿರೆ: ಪುತ್ತಿಗೆ ಗ್ರಾಮದ ಹಂಡೇಲುಸುತ್ತು ಎಂಬಲ್ಲಿ ರವಿವಾರ ಬೆಳಿಗ್ಗೆ ಈಚರ್ ಟೆಂಪೋವೊಂದು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಢಿಕ್ಕಿಯಾದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಕಾಂತಾವರ ನಿವಾಸಿ ಸಂತೋಷ್ ಶೆಟ್ಟಿ(34) ಮೃತಪಟ್ಟ ಸವಾರ. ಸಂತೋಷ್ ಶೆಟ್ಟಿ ತನ್ನ ಮಾವ ಜಯರಾಮ ಶೆಟ್ಟಿ ಎಂಬವರೊಂದಿಗೆ ಕಾಂತವಾರದಿಂದ ಮಿಜಾರಿನಲ್ಲಿರುವ ಸಂಬಂಧಿಕರ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ, ಹಂಡೇಲು ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಟೆಂಪೋ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಸಂತೋಷ್ ಶೆಟ್ಟಿ ಅವರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಹಸವಾರ ಜಯರಾಮ ಶೆಟ್ಟಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story