ಬೆಳೆ ಸಮೀಕ್ಷೆ ಮಾಹಿತಿ: ಆಕ್ಷೇಪಣೆ ಸಲ್ಲಿಸಲು ಅವಕಾಶ
ಉಡುಪಿ, ಸೆ. 22: ಜಿಲ್ಲೆಯಲ್ಲಿ ಜಿಪಿಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಜಾರಿ ಯಲ್ಲಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ದರ್ಶಕ್ ಎಂಬ ಮೊಬೈಲ್ ಆ್ಯಪ್ ಮೂಲಕ ಆಕ್ಷೇಪಣೆ ಗಳನ್ನು ಸಲ್ಲಿಸಲು ಅವಕಾಶವಿದೆ. ‘ಬೆಳೆ ದರ್ಶಕ್ ಕರ್ನಾಟಕ-2020-21’ ಆ್ಯಪ್ನ್ನು ಗೂಗಲ್ ಪ್ಲೇ ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಂಡು , ಆಕ್ಷೇಪಣೆಯನ್ನು ಅ.15 ರೊಳಗೆ ಸಲ್ಲಿಸಬೇಕು.
ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ, ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story