ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವೆಬ್ ಸೈಟ್ ಲೋಕಾರ್ಪಣೆ
ಉಡುಪಿ, ಸೆ.24: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ವೆಬ್ಸೈಟ್ನ್ನು ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಎಂ.ಹರಿಶ್ಚಂದ್ರ ಇತ್ತೀಚೆಗೆ ಉದ್ಘಾಟಿಸಿದರು.
ಸಂಸ್ಥೆಯ ಅಧ್ಯಕ್ಷ ಪ್ರೊ.ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಟಾನದ ಯುವ ವೃಂದವನ್ನು ಆರಂಭಿಸಲಾಯಿತು. ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಉಪಾಧ್ಯಕ್ಷರಾದ ಸಂಧ್ಯಾ ಶೆಣೈ, ವಿಘ್ನೇಶ್ವರ ಅಡಿಗ ಉಪಸ್ಥಿತರಿದ್ದರು.
ಸಂಸ್ಥೆಯ ಸಂಚಾಲಕರಾದ ರವಿರಾಜ್ ಎಚ್.ಪಿ. ಪ್ರಾಸ್ತಾವಿಕ ಮಾತನಾಡಿ ದರು. ಸಂವಿಪ್ರ ಸಂಭ್ರಮದ ಕುರಿತ ಕಾರ್ಯಕ್ರಮಗಳ ಬಗ್ಗೆ ಪೂರ್ಣಿಮ ಜನಾರ್ದನ, ಪದ್ಮಾಸಿನಿ ಉದ್ಯಾವರ, ಮಂಜುಳಾ ಜನಾರ್ದನ್ ಮಾತನಾಡಿ ದರು. ಸಂಸ್ಥೆಯ ಉಪಾಧ್ಯಕ್ಷ ನಾಗರಾಜ್ ಹೆಬ್ಬಾರ್ ಸ್ವಾಗತಿಸಿದರು. ಖಜಾಂಚಿ ರಾಜೇಶ್ ಪಣಿಯಾಡಿ ವಂದಿಸಿದರು.
Next Story