ಮಂಗಳೂರು ಲೇಡಿಹಿಲ್ ಸರ್ಕಲ್ಗೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಲು ಪ್ರಮೋದ್ ಒತ್ತಾಯ
ಉಡುಪಿ, ಸೆ.26: ಮಂಗಳೂರಿನಲ್ಲಿ ಬ್ರಿಟಿಷರ ನೆನಪಿಗಾಗಿ ಇರುವ ಲೇಡಿಹಿಲ್ ಸರ್ಕಲ್ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಮರು ನಾಮಕರಣ ಮಾಡುವಂತೆ ಒತ್ತಾಯಿಸಿರುವ ಪ್ರೆಂಡ್ಸ್ ಬಳ್ಳಾಲ್ಭಾಗ್ ಬಿರುರ್ವೆ ಕುಡ್ಲ ಸಂಘಟನೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬೆಂಬಲ ಸೂಚಿಸಿದ್ದಾರೆ.
ಸಮಾನತೆ ಮತ್ತು ಮಾನವೀಯತೆಯನ್ನು ವಿಶ್ವಕ್ಕೇ ಸಾರಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮತ್ತು ನಾನು ಮಂತ್ರಿ ಆಗಿದ್ದಾಗ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸರಕಾರದ ವತಿಯಿಂದ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಆಚರಿಸಲು ಪ್ರಾರಂಭಿಸಿದೆವು. ಇದು ನನಗೆ ಬಹಳ ಖುಷಿ ತಂದ ವಿಷಯ. ಇಂತಹ ಮಹಾನ್ ವ್ಯಕ್ತಿಯ ಹೆಸರನ್ನು ಲೇಡಿಹಿಲ್ ಸರ್ಕಲ್ಗೆ ಮರುನಾಮಕರಣ ಮಾಡುವ ಮೂಲಕ ಆ ಮಹಾನ್ ನಾಯಕನ ಹೆಸರನ್ನು ಚಿರಸ್ಥಾಯಿಯನ್ನಾಗಿ ಮಾಡಬೇಕು ಎಂದು ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದಾರೆ.
Next Story