ಕರ್ನಾಟಕ ಬಂದ್: ಪಿಎಫ್ಐ ಬೆಂಬಲ
ಉಡುಪಿ, ಸೆ.27: ರೈತ ಸಂಘಟನೆಗಳು ಕರೆ ನೀಡಿರುವ ಸೆ.28ರ ಕರ್ನಾಟಕ ಬಂದ್ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಸಂಪೂರ್ಣ ಬೆಂಬಲ ಸೂಚಿಸಿದೆ.
ಈ ಕಾಯ್ದೆಗಳಿಂದಾಗಿ ಕೃಷಿ ಉತ್ಪಾದನೆ, ಕೃಷಿ ಮಾರುಕಟ್ಟೆ, ಚಿಲ್ಲರೆ ವ್ಯಾಪಾರ ಹಾಗೂ ವಿದ್ಯುತ್ ಎಲ್ಲವೂ ಖಾಸಗೀಕರಣಗೊಳ್ಳಲಿದ್ದು ಕಾರ್ಪೊರೇಟ್ ಕಂಪನಿಗಳ ಕಪಿಮುಷ್ಟಿಯಲ್ಲಿ ಸೇರಿಕೊಳ್ಳಲಿದೆ. ಆದ್ದರಿಂದ ಈ ಬಂದ್ಗೆ ಉಡುಪಿಯ ನಾಗರಿಕರು ಸಂಪೂರ್ಣ ಸಹಕಾರ ನೀಡ ಬೇಕು ಹಾಗೂ ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೆ ಸಹಕರಿಸಬೇಕು ಎಂದು ಪಿಎಫ್ಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story