ಮಂಗಳೂರಿನಲ್ಲಿ ಕರ್ನಾಟಕ ಬಂದ್ಗೆ ಸಿಗದ ಬೆಂಬಲ
ಮಂಗಳೂರು, ಸೆ.28: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಜನವಿರೋಧಿ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕರೆಗೆ ಮಂಗಳೂರಿನಲ್ಲಿ ಬೆಂಬಲ ವ್ಯಕ್ತವಾಗಿಲ್ಲ.
ನಗರದಲ್ಲಿಂದು ಬೆಳಗ್ಗೆಯಿಂದ ಎಂದಿನಂತೆ ವಾಹನ ಸಂಚಾರಗಳು ನಿರಾಂತಕರವಾಗಿವೆ. ಕೆಎಸ್ಸಾರ್ಟಿಸಿ ಸೇರಿದಂತೆ ಖಾಸಗಿ ಬಸ್ ಸಂಚಾರ ಎಂದಿನಂತಿವೆ. ಅಂಗಡಿಮುಂಗಟ್ಟುಗಳು ತೆರೆದಿದ್ದು, ಜನಸಂಚಾರ ಕೂಡಾ ಸಾಮಾನ್ಯವಾಗಿದೆ.
ಈ ನಡುವೆ ನಗರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ಪಹರೆ ನಡೆಸುತ್ತಿದ್ದಾರೆ.
ಬಂದ್ ಕರೆ ಹಿನ್ನೆಲೆಯಲ್ಲಿ ಮಂಗಳೂರಿನ ಮಿನಿ ವಿಧಾನದ ಎದುರು ರೈತ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ. ಉಳಿದಂತೆ ನಗರದಲ್ಲಿ ಬಂದ್ಗೆ ಯಾವುದೇ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.