ಬೆಳ್ತಂಗಡಿ ಆಸ್ಪತ್ರೆಗೆ ದ.ಕ. ಜಿಲ್ಲಾಧಿಕಾರಿ ಭೇಟಿ
ಬೆಳ್ತಂಗಡಿ : ಕೋವಿಡ್ ಪ್ರಕರಣ ನಿಯಂತ್ರಣ ತರುವ ಸಲುವಾಗಿ ಗ್ರಾಮ ಮಟ್ಟದಲ್ಲಿ ಪರೀಕ್ಷಾ ಮಿತಿ ಹೆಚ್ಚಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.
ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಇಲಾಖೆಗಳಡಿ ಕೈಗೊಳ್ಳಬೇಕಾಗಿರುವ ಅಭಿವೃದ್ಧಿ ಕಾರ್ಯಕ್ರಮದ ವಿಚಾರವಾಗಿ ಸೆ.30 ರಂದು ಸಭೆ ನಡೆಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
ಬೆಳ್ತಂಗಡಿ ಅಭಿವೃದ್ಧಿ ಪೂರಕ ಯೋಜನೆಗಳ ಕುರಿತಾಗಿ ಬೆಳ್ತಂಗಡಿಗೆ ಭೆಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿತ್ತು. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಅಭಿವೃದ್ಧಿ, ಕುಡಿಯುವ ನೀರಿನ ನಿರ್ವಹಣೆ, ಘನತ್ಯಾಜ್ಯ ಘಟಕ ನಿರ್ವಹಣೆ ಕುರಿತಾದ ಒಂದಿಷ್ಟು ಅಭಿವೃದ್ಧಿ ಪೂರಕ ವಿಚಾರಗಳೆಡೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು ಎಂದರು.
Next Story