ವೇಶ್ಯಾವಾಟಿಕೆ ಆರೋಪ: ನಾಲ್ವರ ಬಂಧನ; ಇಬ್ಬರು ಯುವತಿಯರ ರಕ್ಷಣೆ
ಮಂಗಳೂರು, ಅ.4: ನಗರದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದ ಆರೋಪದಲ್ಲಿ ಫ್ಲಾಟ್ವೊಂದಕ್ಕೆ ದಾಳಿ ನಡೆಸಿದ ಪಾಂಡೇಶ್ವರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೆ, ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.
ಬೋಳೂರು ನಿವಾಸಿ ಗಣೇಶ್ (28), ಉಪ್ಪಳ ನಿವಾಸಿ ಹರಿಣಾಕ್ಷಿ (47), ಅಫೀಜ್ (62), ಸರ್ಫುದ್ದೀನ್ (30) ಬಂಧಿತ ಆರೋಪಿಗಳು.
ಪ್ರಕರಣ ವಿವರ: ನಗರದ ವೆಲೆನ್ಸಿಯ ಫ್ಲಾಟ್ವೊಂದರಲ್ಲಿ ವೇಶ್ಯಾವಾಟಿಕೆ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ಬೆಂಗಳೂರಿನ 20 ಮತ್ತು 22 ವರ್ಷದ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಂಡೇಶ್ವರ ಇನ್ಸ್ಪೆಕ್ಟರ್ ಲೋಕೇಶ್ ಎ.ಸಿ. ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ನಗರ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ನಡೆಯುತ್ತಿದೆ.
Next Story