ಕೊಣಾಜೆ: ಮರಿಕ್ಕಳದಲ್ಲಿ ಬೇಕಲ್ ಉಸ್ತಾದ್ ಅನುಸ್ಮರಣೆ
ಕೊಣಾಜೆ: ಮರಿಕ್ಕಳ ಜುಮಾ ಮಸ್ಜಿದ್ ನಲ್ಲಿ ಸುದೀರ್ಘ 38 ವರ್ಷಗಳ ಕಾಲ ಅಧ್ಯಕ್ಷರೂ, ಕಳೆದ 5 ವರ್ಷಗಳ ಕಾಲ ಖಾಝಿಯೂ ಆಗಿದ್ದ ತಾಜುಲ್ ಬೇಕಲ್ ಉಸ್ತಾದ್ ಅವರ ಅನುಸ್ಮರಣೆ ಹಾಗೂ ಪ್ರಾರ್ಥನಾ ಸಂಗಮವು ಮರಿಕ್ಕಳದಲ್ಲಿ ನಡೆಯಿತು
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಝೈನುಲ್ ಉಲಮಾ ಮಾಣಿ ಉಸ್ತಾದ್ ಅನುಸ್ಮರಣಾ ಭಾಷಣ ಮಾಡಿದರು. ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲೈಲ್ ತಂಙಳ್ ಕಾಜೂರು ಪ್ರಾರ್ಥನಾ ಸಂಗಮಕ್ಕೆ ನೇತೃತ್ವ ನೀಡಿದರು. ಅಲ್ ಹಾಜ್ ಹುಸೈನ್ ಸಅದಿ ಕೆ.ಸಿ ರೋಡ್ ಉದ್ಘಾಟನಾ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಶಾಸಕರಾದ ಯು.ಟಿ ಖಾದರ್, ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಎಸ್ಸೆಸ್ಸೆಫ್ ರಾಷ್ಟ್ರೀಯ ಸದಸ್ಯ ಕೆ.ಎಂ ಅಬೂಬಕ್ಕರ್ ಸಿದ್ದೀಖ್ ಮೋಂಟುಗೋಳಿ,ಬೇಕಲ್ ಖತೀಬ್ ಶಾಫಿ ಬಾಖವಿ ಚಾಲಿಯ,ಹಮೀದ್ ಪೈಝಿ ಕಿಲ್ಲೂರು ಮೊದಲಾದ ಗಣ್ಯರು ಆಶಂಶ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಮರಿಕ್ಕಳ ಜುಮಾ ಮಸ್ಜಿದ್ ಅಧ್ಯಕ್ಷರಾದ ಅಬ್ಬಾಸ್ ಕೊಡಂಚಲ್, ಮರಿಕ್ಕಳ ಜುಮಾ ಮಸ್ಜಿದ್ ಖತೀಬ್ ಅಬ್ಬಾಸ್ ಸಖಾಫಿ ಮಡಿಕೇರಿ, ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ, ಜಬ್ಬಾರ್ ಸಅದಿ ಪೆರ್ನೆ, ಜಮಾಅತ್ ಕಾರ್ಯದರ್ಶಿ ಅಬ್ಬಾಸ್ ಚಂದಹಿತ್ಲು, ಕೋಶಾಧಿಕಾರಿ ಹನೀಫ್ ಚಂದಹಿತ್ಲು ಉಪಸ್ಥಿತರಿದ್ದರು.
ಮರಿಕ್ಕಳ ಜಮಾಅತ್ ಖತೀಬ್ ಅಬ್ಬಾಸ್ ಸಖಾಫಿ ಮಡಿಕೇರಿ ವಂದಿಸಿದರು.