ಹಳೆಯಂಗಡಿ: ಸರಕಾರಿ ಬಸ್ ಗಳ ನಡುವೆ ಅಪಘಾತ; 12 ಪ್ರಯಾಣಿಕರಿಗೆ ಗಾಯ
ಮುಲ್ಕಿ, ಅ.5: ಎರಡು ಸರಕಾರಿ ಬಸ್ಸುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 12 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಎದುರುಗಡೆ ಸೋಮವಾರ ಮುಂಜಾನೆ 5:30ರ ಸುಮಾರಿಗೆ ನಡೆದಿರುವುದು ವರದಿಯಾಗಿದೆ.
ಮಂಗಳೂರು ಡಿಪೋ ಸರಕಾರಿ ಬಸ್ಸಿನ ಹಿಂಭಾಗಕ್ಕೆ ಉತ್ತರ ಕರ್ನಾಟಕದ ಸರಕಾರಿ ಬಸ್ಸೊಂದು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಮಂಗಳೂರು ಡಿಪೋಗೆ ಸೇರಿದ ಬಸ್ಸು ಹೆದ್ದಾರಿಯಿಂದ ಚರಂಡಿಗೆ ಸರಿದಿದೆ. ಗಾಯಾಳುಗಳ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಅಪಘಾತದ ರಭಸಕ್ಕೆ 2 ಬಸ್ಸುಗಳಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.