ಉಳ್ಳಾಲ: ಲಾರಿ ಢಿಕ್ಕಿ; ಪಾದಚಾರಿ ಯುವಕ ಮೃತ್ಯು
ಉಳ್ಳಾಲ : ಕೇರಳ ಕಡೆಗೆ ಹೋಗುತ್ತಿದ್ದ ಲಾರಿಯೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೆ.ಸಿ.ರೋಡ್ ಬಳಿ ನಿನ್ನೆ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ತಲಪಾಡಿ ನಿವಾಸಿ ನಾಸೀರ್ (30) ಎಂದು ಗುರುತಿಸಲಾಗಿದೆ.
ಅವರು ಕೆಸಿರೋಡ್ ಬಳಿ ಪೇಟೆಗೆಂದು ರಾತ್ರಿ ವೇಳೆ ಬಂದಿದ್ದರು. ಬಳಿಕ ಮನೆಗೆ ವಾಪಾಸಗಲು ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರಿನಿಂದ ಕೇರಳ ಕಡೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ವ್ಯಕ್ತಿಯ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಹರಿದು ಪರಾರಿ ಯಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
Next Story