ಕಾರು ಢಿಕ್ಕಿ: ರಸ್ತೆ ದಾಟುತ್ತಿದ್ದ ಮಗು ಮೃತ್ಯು
ಬ್ರಹ್ಮಾವರ, ಅ.12: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಮಗುವೊಂದು ಮೃತಪಟ್ಟ ಘಟನೆ ಅ.12ರಂದು ಮಧ್ಯಾಹ್ನ ವೇಳೆ ಬ್ರಹ್ಮಾವರ ಸಮೀಪದ ಪಿಂಗಾರ ಹೊಟೇಲ್ ಎದುರಿನ ರಾ.ಹೆ.66ರಲ್ಲಿ ನಡೆದಿದೆ.
ಬಾಗಲಕೋಟೆಯ ಹುನಗುಂದ ತಾಲೂಕಿನ ವಲಸೆ ಕಾರ್ಮಿಕ ಬಸವರಾಜ ಎಂಬವರ ಮೂರುವರೆ ವರ್ಷ ಪ್ರಾಯದ ಮಗು ಶಿವರಾಮ ಮೃತ ದುರ್ದೈವಿ. ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು, ಇತರ ಇಬ್ಬರು ಬಾಲಕರೊಂದಿಗೆ ರಸ್ತೆ ದಾಟಲು ನಿಂತಿದ್ದ ಮಗುವಿಗೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಗು, ಚಿಕಿತ್ಸೆ ಫಲಕಾರಿ ಯಾಗದೆ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯಾಹ್ನ 2:15 ಸುಮಾರಿಗೆ ಮೃತಪಟ್ಟಿತ್ತೆನ್ನಲಾಗಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story