ಸಿದ್ದಾಪುರ : ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಕಾರು ; ಯುವತಿ ಸೇರಿ ಮೂವರು ಮೃತ್ಯು
ಸಿದ್ದಾಪುರ: ಉಂಚಳ್ಳಿ ಜಲಪಾತ ವಿಕ್ಷಣೆಗೆ ತೆರಳಿ ವಾಪಸ್ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಯುವಕರು, ಓರ್ವ ಯುವತಿ ಸೇರಿ ಮೂವರು ಮೃತಪಟ್ಟ ಘಟನೆ ಸಿದ್ದಾಪುರ ತಾಲೂಕಿನ ಕೊಡ್ನಮನೆಯಲ್ಲಿ ನಡೆದಿದೆ.
ಘಟನೆ ಬುಧವಾರ ರಾತ್ರಿ ಸುಮಾರಿಗೆ ನಡೆದಿದ್ದು ಗುರವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಕಾರಿಗೆ ಧಾರವಾಡದ ನೊಂದಣಿ ಸಂಖ್ಯೆಯಿದ್ದು, ಮೃತರು ಹುಬ್ಬಳ್ಳಿಯವರು ಎಂದು ಅಂದಾಜಿಸಲಾಗಿದೆ.
ಮೃತ ಮೂವರೂ ಸುಮಾರು 25 ವರ್ಷದ ಒಳಗಿನವರಾಗಿದ್ದು, ಸಿದ್ದಾಪುರ ಉಂಚಳ್ಳಿ ಜಲಪಾತಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
ಕೋಡ್ನಗದ್ದೆ ಸಮೀಪದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಹೊಳೆಗೆ ಬಿದ್ದಿದ್ದು, ನೀರಿನ ರಭಸಕ್ಕೆ ಸುಮಾರು 100 ಮೀ. ತೆಲಿಕೊಂಡು ಹೋಗಿದೆ. ಗುರುವಾರ ಸ್ಥಳೀಯರು ಹೊಳೆಯಲ್ಲಿ ಕಾರನ್ನು ಗಮನಿಸಿದ್ದು, ಕಾರಿನಿಂದ ಮೂವರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Next Story