‘ನನ್ನ ಕುಟುಂಬ ನನ್ನ ಜವಾಬ್ದಾರಿ’ ಜಾಗೃತಿ ಸ್ಟಿಕರ್ ಅಳವಡಿಕೆ
ಉಡುಪಿ, ಅ.17: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಕುರಿತು ಪ್ರತಿ ಮನೆ ಮನೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ರೂಪಿಸಿ ರುವ ‘ನನ್ನ ಕುಟುಂಬ ನನ್ನ ಜವಾಬ್ದಾರಿ’ ಅಭಿಯಾನದ ಸ್ಟಿಕರ್ನ್ನು ಜಿಲ್ಲಾ ನ್ಯಾಯಾಲಯದ ಸಮೀಪದ ವಸತಿ ಸಂಕೀರ್ಣದಲ್ಲಿನ ಮನೆಯ ಬಾಗಿಲಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮತ್ತು ಜಿಲ್ಲಾಧಿಕಾರಿ ಜಿ.ಜಗದೀಶ್ ಅಂಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸ್ಟಿಕರ್ನಲ್ಲಿ ಮನೆಯಲ್ಲಿನ ಪ್ರತಿ ಸದಸ್ಯರು ಕೋವಿಡ್ -19 ನಿಂದ ತಮ್ಮ ಕುಟುಂಬವನ್ನು ರಕ್ಷಿಸಲು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಕುಟುಂಬದ ಹಿರಿಯ ಸದಸ್ಯರನ್ನು ಸೋಂಕಿಗೆ ಒಳಗಾಗದಂತೆ ರಕ್ಷಿಸುತ್ತೇನೆ, ಗರ್ಭಿಣಿ ಮಹಿಳೆಯರನ್ನು ಸೋಂಕಿಗೆ ಒಳಗಾಗ ದಂತೆ ರಕ್ಷಿಸುತ್ತೇನೆ, ಕುಟುಂಬದ ಸದಸ್ಯರಿಗೆ ರೋಗ ಲಕ್ಷಣಗಳಿದ್ದಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲು ಬದ್ದನಾಗಿ ದ್ದೇನೆ, ಕೋವಿಡ್ ಪ್ರಸರಣ ಸರಪಳಿಯನ್ನು ಮೊಟಕುಗೊಳಿಸಲು ನನ್ನ ಕಡೆ ಯಿಂದ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ಸಹಿ ಮಾಡಿದ ಸ್ವಯಂ ಘೋಷಣಾ ಪ್ರಮಾಣ ಪತ್ರದ ಪ್ರತಿ ಇರುತ್ತದೆ.
ಜಿಲ್ಲೆಯ ಪ್ರತೀ ಮನೆ ಮನೆಗೂ ಈ ಸ್ಟಿಕರ್ ಅಂಟಿಸಿ, ಸಹಿ ಮಾಡಿದ ಸ್ವಯಂ ಘೋಷಣಾ ಪತ್ರವನ್ನು ಪಡೆಯುವ ಹಾಗೂ ಮನೆಯವರಿಂದ ಪ್ರತಿಜ್ಞೆ ಪಡೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಓ ಡಾ.ನವೀನ್ ಭಟ್, ಡಿಎಚ್ಓ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಡಾ.ಪ್ರೇಮಾನಂದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮ್ ಸಾಗರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.