ರೈಲ್ವೆ ಯಾತ್ರಿ ಸಂಘದ ವಾರ್ಷಿಕ ಮಹಾಸಭೆ
ಉಡುಪಿ, ಅ.18: ಉಡುಪಿ ರೈಲ್ವೆ ಯಾತ್ರಿ ಸಂಘದ 2020-21 ನೇ ಸಾಲಿನ ಮಹಾಸಭೆಯು ಗುರುವಾರ ಉಡುಪಿ ಬಳಕೆದಾರರ ವೇದಿಕೆ ಸಭಾಂಗಣದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಆರ್.ಎಲ್.ಡಾಯಸ್ ವಹಿಸಿದ್ದರು. ಇತ್ತೀಚೆಗೆ ನಿಧನರಾದ ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಸಲ್ಲಿಸಲಾಯಿತು. ಅಗಲಿದ ಸಂಘದ ನಿರ್ದೇಶಕ ಸುಂದರ ಕೋಟ್ಯಾನ್ ರವರ ಆತ್ಮಕ್ಕೆ ಶಾಂತಿ ಕೋರಲಾಯಿತು.
ಸಂಘದ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ರಾಮಚಂದ್ರ ಆಚಾರ್ಯ ಲೆಕ್ಕಪತ್ರ ವರದಿಯನ್ನು ಮಂಡಿಸಿದರು. ಉಪಾಧ್ಯಕ್ಷ ಅಜಿತ್ ಶೆಣೈ, ನಿರ್ದೇಶಕರುಗಳಾದ ಜಾನ್ ರೆಬೆಲ್ಲೊ, ಜನಾರ್ದನ್ ಕೋಟ್ಯಾನ್, ಸದಾನಂದ ಅಮೀನ್, ಧೀರಜ್ ಎನ್. ಶಾಂತಿ, ಬಳಕೆದಾರರ ವೇದಿಕೆಯ ದಾಮೋದರ್ ಐತಾಳ್ ವೊದಲಾದವರು ಉಪಸ್ಥಿತರಿದ್ದರು.
ಸಂಘದ ನಿರ್ದೇಶಕ ಶೇಖರ್ ಕೋಟ್ಯಾನ್ ಸ್ವಾಗತಿಸಿದರು. ಪ್ರಭಾಕರ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
Next Story