ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರು ಬೌದ್ಧಧರ್ಮಕ್ಕೆ ಮತಾಂತರ
ಸುಗತಪಾಲ ಭಂತೇಜಿಯಿಂದ ಬೌದ್ಧರಿಗೆ ಪ್ರಮಾಣವಚನ ಬೋಧನೆ
ಉಡುಪಿ, ಅ.19: ಉಡುಪಿ ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಅ.18ರಂದು ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾದ ಬಾಬಾಸಾಹೇಬ್ ಅಂಬೇಡ್ಕರ್ರವರ 64ನೇ ದಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ ಜಿಲ್ಲೆಯ ಸುಮಾರು 50ಕ್ಕೂ ಅಧಿಕ ದಲಿತರು ಭೌದ್ಧಧರ್ಮಕ್ಕೆ ಮತಾಂತರಗೊಂಡರು.
ಮೈಸೂರು ಕೊಳ್ಳೆಗಾಲ ಜೀವನ ಬುದ್ಧ ವಿಹಾರದಿಂದ ಆಗಮಿಸಿದ ಸುಗತಪಾಲ ಭಂತೇಜಿ ಮತಾಂತರಗೊಂಡ ಬೌದ್ಧರಿಗೆ ಪ್ರಮಾಣವಚನ ಬೋಧಿಸಿದರು. ಬೌದ್ಧಧರ್ಮಕ್ಕೆ ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣವಚನ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಲ್ಲಿ ಪದವಿ ಪೂರ್ವ ಮತ್ತು ಹತ್ತನೇ ತರಗತಿಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸಹಾಯಧನ ನೀಡಿ ಸನ್ಮಾನಿಸಲಾಯಿತು. ಮುಖ್ಯ ಭಾಷಣ ಕಾರರಾಗಿ ಉಪನ್ಯಾಸಕ ಭಾಸ್ಕರ್ ವಿಟ್ಲ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು, ಬುದ್ಧ ದಮ್ಮದ ವಿಚಾರಧಾರೆಗಳ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಸುಂದರ ಮಾಸ್ತರ್, ಶ್ಯಾಮ ರಾಜ್ ಬಿರ್ತಿ, ನಾರಾಯಣ ಮಣೂರು, ಶೇಖರ್ ಹೆಜಮಾಡಿ, ಶೇಖರ ಹಾವಂಜೆ, ಶಂಭು ಮಾಸ್ಟರ್, ಪುಷ್ಪಾಕರ್, ಮಂಜುನಾಥ್ ಗಿಳಿ ಯಾರು, ಅಣ್ಣಪ್ಪನಕ್ರೆ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ್ ವಿ., ಕೀರ್ತಿಕುಮಾರ್ ಪಡುಬಿದ್ರಿ, ವಿಠಲ ತೊಟ್ಟಂ, ರವೀಂದ್ರ ಬಂಟಕಲ್ಲು, ರಾಘವೇಂದ್ರ ಬೆಳ್ಳೆ, ರಾಜೇಂದ್ರ ಬೆಳ್ಳೆ, ಭಾಸ್ಕರ್ ಮಾಸ್ತರ್ ಕುಂಜಿಬೆಟ್ಟು, ವಿಠಲ ಉಚ್ಚಿಲ, ಗೋಪಾಲಕೃಷ್ಣ ಕುಂದಾಪುರ, ಮಂಜುನಾಥ ಬಾಳ್ಕುದ್ರು, ಸುರೇಶ ಬಾರ್ಕೂರು, ಕೃಷ್ಣ ಎಲ್ಐಸಿ, ಪರಮೇಶ್ವರ್ ಉಪ್ಪೂರು, ಅಜಯ ಕುಮಾರ್, ಆನಂದ ಬ್ರಹ್ಮಾವರ, ಮುರಳೀಧರ್, ರಮೇಶ್ ಮೊದಲಾದವರು ಉಪಸ್ಥಿತರಿದ್ದರು.