ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಉಡುಪಿ, ಅ.23: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ಅ.28ರಂದು ಬೆಳಗ್ಗೆ 11 ರಿಂದ ಅಪರಾಹ್ನ 1 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಹಾಗೂ ಅಪರಾಹ್ನ 2:30ರಿಂದ ಸಂಜೆ 4:30 ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಮತ್ತು ಅ.29ರಂದು ಬೆಳಗ್ಗೆ 11 ರಿಂದ ಅಪರಾಹ್ನ 1 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ 2:00ರಿಂದ ಸಂಜೆ 4:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರರು ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ, ನಿರ್ಲಕ್ಷತೆ ತೋರಿದ್ದಲ್ಲಿ ಅಥವಾ ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story