ಕೃಷಿ ಮಸೂದೆ ವಿರೋಧಿಸಿ ಹೊಸಂಗಡಿಯಲ್ಲಿ ಪ್ರತಿಭಟನೆ
ಮಂಜೇಶ್ವರ, ನ.5: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಆಲ್ ಇಂಡಿಯಾ ಕಿಸಾನ್ ಸಭಾ(ಎಐಕೆಎಸ್) ಕೇರಳ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಯ ಅಂಗವಾಗಿ ಹೊಸಂಗಡಿ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ ವೇಳೆ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿಯ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ಘಾಟಿಸಿದ ಎಐಕೆಎಸ್ ರಾಜ್ಯ ಸಮಿತಿ ಸದಸ್ಯ ಕೆ.ಆರ್.ಜಯಾನಂದ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚಂದ್ರಹಾಸ ಶೆಟ್ಟಿ ಮಾಸ್ತರ್, ಗೀತಾ ಸಾಮಾನಿ, ಯಾಕೂಬ್ ಕುಂಜತ್ತೂರು, ಹುಸೈನ್ ಮಾಸ್ತರ್, ಪ್ರಭಾಕರ ಶೆಟ್ಟಿ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು.
ಅಶೋಕ್ ಭಂಡಾರಿ ಕುಡಾಲ್ ಸ್ವಾಗತಿಸಿದರು. ಸಿಐಟಿಯು ಮಂಜೇಶ್ವರ ಏರಿಯ ಅಧ್ಯಕ್ಷ ಪ್ರಶಾಂತ್ ಕನಿಲ ವಂದಿಸಿದರು.
Next Story