ಕಾರು ಢಿಕ್ಕಿ : ಬೈಕ್ ಸವಾರ ಮೃತ್ಯು
ಮಂಗಳೂರು, ನ.14: ನಗರ ಹೊರವಲಯದ ಕಾವೂರು ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕಾವೂರು ಶಾಂತಿನಗರ ನಿವಾಸಿ ಸವಾಫ್ (24) ಮೃತಪಟ್ಟ ಯುವಕ.
ಸವಾಫ್ ಬೈಕ್ನಲ್ಲಿ ಸ್ನೇಹಿತ ಶಬೀಬ್ ಜೊತೆಗೂಡಿ ತೆರಳುತ್ತಿದ್ದ ವೇಳೆ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ಬೈಕ್ ಸವಾರ ಸವಾಫ್ ಮೃತಪಟ್ಟಿದ್ದಾರೆ.
ಸಹ ಸವಾರ ಶಬೀಬ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವ ಸಂಚಾರ ಉತ್ತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಚಾಲಕ ತನ್ನ ಕಾರನ್ನು ತೀರಾ ಬಲಬದಿಯಲ್ಲಿ ಚಲಾಯಿಸಿದ ಪರಿಣಾಮ ಬೈಕ್ಗೆ ಕಾರು ಢಿಕ್ಕಿ ಹೊಡೆದಿದೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅದರೆ ಸವಾಫ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅರೋಪಿ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ.
Next Story