ನ.20 ರಂದು ಪ್ರವಾದಿ ಜೀವನ -ಸಂದೇಶ ಕಾರ್ಯಕ್ರಮ
ಉಡುಪಿ, ನ. 19: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ ಮಾನವತೆಯ ಪ್ರತಿಪಾದಕ ಪ್ರವಾದಿ ಮುಹಮ್ಮದ್ (ಸ.ಅ.)ರ ಜೀವನ ಮತ್ತು ಸಂದೇಶ ಕಾರ್ಯಕ್ರಮವನ್ನು ನ.20 ರಂದು ಸಂಜೆ 6ಗಂಟೆಯಿಂದ 8ಗಂಟೆಯವರೆಗೆ ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಮಿನಿ ಹಾಲ್ನಲ್ಲಿ ಆಯೋಜಿಸಲಾಗಿದೆ.
ಮಲ್ಪೆ ಅಬೂಬಕರ್ ಸಿದ್ದೀಕ್ ಜುಮಾ ಮಸೀದಿಯ ಖತೀಬ್ ವೌಲಾನಾ ಇಮ್ರಾನುಲ್ಲಾ ಖಾನ್ ಮನ್ಸೂರಿ ವಿಷಯ ಮಂಡನೆ ಮಾಡಲಿರುವರು. ಅಧ್ಯಕ್ಷತೆಯನ್ನು ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಯಾಸೀನ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಲ್ಯಾಣಪುರ ಮಿಲಾಗ್ರೀಸ್ ಚರ್ಚ್ನ ಧರ್ಮಗುರು ಫಾ.ವಲೇರಿಯನ್ ಮೆಂಡೋನ್ಸಾ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ದಿನೇಶ್ ಕಿಣಿ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story