ಉಡುಪಿ ಸಹಾಯಕ ಔಷಧ ನಿಯಂತ್ರಕರ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ
ಉಡುಪಿ, ನ.22: ಶಿವಳ್ಳಿ ಗ್ರಾಮದ ದೊಡ್ಡಣಗುಡ್ಡೆಯ ಬಾಲಾಜಿ ಲೇಔಟ್ ಬಳಿಯ ನಿರ್ಮಾಣವಾಗಲಿರುವ ಉಡುಪಿ ಸಹಾಯಕ ಔಷಧ ನಿಯಂತ್ರಕರ ಕಚೇರಿ ನೂತನ ಕಟ್ಟಡದ ಕಾಮಗಾರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರವಿವಾರ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಸಭಾ ಸದಸ್ಯೆ ಮಾನಸ ಪೈ, ಉಡುಪಿ ಜಿಲ್ಲಾ ಔಷಧ ವ್ಯಾಪಾರಸ್ಥ ಸಂಘದ ಅಧ್ಯಕ್ಷ ವಿ.ಜಿ.ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿ ಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಇ.ಪುಟ್ಟಿರ ಶೆಟ್ಟಿ, ಮಂಗಳೂರು ಸಹಾಯಕ ಔಷಧ ನಿಯಂತ್ರಕ ಶಂಕರ್ ನಾಯಕ್, ರಾಧಾ ಮೆಡಿಕಲ್ಸ್ ಆಡಳಿತ ವ್ಯವಸ್ಥಾಪಕ ಮನೋಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
‘ಸುಮಾರು 22.5 ಸೆಂಟ್ಸ್ ಜಾಗದಲ್ಲಿ 2.5ಕೋಟಿ ರೂ. ವೆಚ್ಚದಲ್ಲಿ ಈ ಕಟ್ಟಡವನ್ನು ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿ ಯರಿಂಗ್ ವಿಭಾಗದ ನಿರ್ಮಿಸಲಿದೆ. 12 ತಿಂಗಳಲ್ಲಿ ಕಾಮಗಾರಿ ಪೂರ್ಣ ಗೊಳ್ಳಲಿದೆ’ ಎಂದು ಉಡುಪಿ ಸಹಾಯಕ ಔಷಧ ನಿಯಂತ್ರಕರಾದ ಕೆ.ವಿ ನಾಗರಾಜ್ ತಿಳಿಸಿದ್ದಾರೆ.
Next Story