ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿ ಸುಲಿಗೆ
ಉಡುಪಿ, ನ.23: ಮೀನಿನ ಬುಟ್ಟಿಯನ್ನು ಹೊತ್ತು ಕೊಂಡು ಹೋಗುತ್ತಿದ್ದ ಮಹಿಳೆಯ ಕತ್ತಿನಲ್ಲಿದ್ದ ಕರಿಮಣಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಸುಲಿಗೆ ಮಾಡಿರುವ ಘಟನೆ ಉಡುಪಿ ಬೋರ್ಡ್ ಹೈಸ್ಕೂಲ್ ಶಾಲೆಯ ಹಿಂಬದಿ ರಸ್ತೆಯಲ್ಲಿ ನ.22 ರಂದು ಮಧ್ಯಾಹ್ನ ವೇಳೆ ನಡೆದಿದೆ.
ಬ್ರಹ್ಮಗಿರಿ ಐಬಿ ರಸ್ತೆಯ ನಿವಾಸಿ ವಾರಿಜ(57) ಎಂಬವರು ತನ್ನ ತಂಗಿ ಯೊಂದಿಗೆ ಮೀನಿನ ಬುಟ್ಟಿಯನ್ನು ಹೊತ್ತುಕೊಂಡು ಬರುತ್ತಿರುವಾಗ ರಸ್ತೆಯ ಬದಿಯಲ್ಲಿ ಕಪ್ಪು ಬಣ್ಣದ ಬೈಕಿನಲ್ಲಿ ಕುಳಿತುಕೊಂಡಿದ್ದ ಅಪರಿಚಿತ ಯುವಕನೊಬ್ಬ ವಾರಿಜ ಅವರ ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಬಲಾತ್ಕಾರವಾಗಿ ಕಿತ್ತುಕೊಂಡು ಪರಾರಿಯಾದನು ಎನ್ನಲಾಗಿದೆ.
ಅಂದಾಜು 30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ, ಕೆಂಪು, ತಿಳಿ ಗುಲಾಬಿ ಇತರೆ ಬಣ್ಣದ ತುಂಬು ತೋಳಿನ ಚೆಕ್ಸ್ ಶರ್ಟ್, ಜೀನ್ಸ್ ಪ್ಯಾಂಟ್ ಧರಿಸಿದ್ದನು. ಕಳವಾದ 4 ಪವನ್ ತೂಕದ ಕರಿಮಣಿ ವೌಲ್ಯ 1,20,000 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story