ನ. 26ರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ
ಮಂಗಳೂರು, ನ.24: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ನ.26ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಸಿಪಿಐ ದ.ಕ.ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲ ಘೋಷಿಸಿದೆ.
ಕೇಂದ್ರದ ನರೇಂದ್ರ ಮೋದಿ ಸರಕಾರ ಹಾಗೂ ರಾಜ್ಯದ ಯಡಿಯೂರಪ್ಪಸರಕಾರವು ದೇಶದ ಬಂಡವಾಳಗಾರರ ಪರವಾಗಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಪ್ರಯತ್ನದ ವಿರುದ್ಧ ಹಾಗೂ ದೇಶದ ಕೃಷಿಪರ ಕಾನೂನುಗಳನ್ನು ಕಂಪೆನಿಗಳ ಪರವಾಗಿ ತಿದ್ದುಪಡಿ ಮಾಡುತ್ತಿರುವ ಸುಗ್ರೀವಾಜ್ಞೆ ವಿರುದ್ಧವಾಗಿ ನಡೆಯಲಿರುವ ಸಾರ್ವತ್ರಿಕ ಮುಷ್ಕರವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕು ಎಂದು ಸಮಿತಿಯ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಮನವಿ ಮಾಡಿದ್ದಾರೆ.
Next Story