ಮೀನಿನ ಲಾರಿ ಬೈಕ್ ಢಿಕ್ಕಿ : ಸವಾರ ಮೃತ್ಯು
ಮಂಗಳೂರು, ನ.24: ಸುರತ್ಕಲ್ ಸಮೀಪದ ಎನ್ಐಟಿಕೆ ಬಳಿ ಬೈಕ್ವೊಂದಕ್ಕೆ ಮೀನಿನ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಸೂರಿಂಜೆ ನಿವಾಸಿ ವಿನೋದ್ ಕುಮಾರ್ (45) ಮೃತ ಬೈಕ್ ಸವಾರ ಎಂದು ತಿಳಿದುಬಂದಿದೆ. ಬೈಕ್ ಸವಾರನು ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುವ ರಾ.ಹೆ.ಯಲ್ಲಿ ಸಾಗುತ್ತಿದ್ದ. ಈ ಮಧ್ಯೆ ಎನ್ಐಟಿಕೆ ಸಮೀಪದಲ್ಲಿ ಯು ಟರ್ನ್ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಮೀನಿನ ಲಾರಿ ಢಿಕ್ಕಿಯಾಗಿದೆ. ಲಾರಿಯು ಬೈಕ್ನ್ನು ಕೆಲವು ಮೀಟರ್ಗಳ ವರೆಗೆ ತಳ್ಳಿಕೊಂಡು ಹೋಗಿದೆ.
ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡಿದ್ದರು. ಈತನನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸು ವಷ್ಟರಲ್ಲಿ ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಕುರಿತು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story