ನ.27ರಂದು ಐಎಎಸ್, ಕೆಎಎಸ್ ತರಬೇತಿಗೆ ಚಾಲನೆ
ಉಡುಪಿ, ನ. 25: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್ಲೈನ್ ತರಬೇತಿ ಆಯೋಜಿಸಿದ್ದು, ನ.27ರ ಬೆಳಗ್ಗೆ 11 ಗಂಟೆಗೆ ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷ ಅವರು ಬೆಂಗಳೂರಿನಿಂದಲೇ ತರಬೇತಿ ಉದ್ಘಾಟಿಸಿ, ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ ಕುರಿತು ಮಾಹಿತಿ ನೀಡುವರು.
ಮೈಸೂರು ನಗರ ಪೊಲೀಸ್ ಉಪ ಆಯುಕ್ತ ಡಾ. ಎ.ಎನ್ ಪ್ರಕಾಶ್ ಗೌಡ ಆನ್ಲೈನ್ನಲ್ಲಿ ಪರೀಕ್ಷಾ ಅಧ್ಯಯನ ಕ್ರಮದ ಕುರಿತು ಮಾಹಿತಿ ನೀಡುವರು.
ಕರ್ನಾಟಕ ರಾಜ್ಯ ಮುಕ್ತ ವಿವಿಯ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಲಿಂಗರಾಜ ಗಾಂಧಿ ಉಪಸ್ಥಿತರಿ ರುವರು ಎಂದು ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯ ನಾರಾಯಣ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story