ಡಾ.ಕಾತ್ಯಾಯಿನಿ ಕುಂಜಿಬೆಟ್ಟುಗೆ ‘ಕನಕ ಯುವ ಪುರಸ್ಕಾರ’
ಉಡುಪಿ, ನ.25: ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ನೀಡಲಾಗುವ 2019-20ನೇ ಸಾಲಿನ ‘ಕನಕ ಯುವ ಪುರಸ್ಕಾರ’ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಕನ್ನಡ ಮತ್ತು ತುಳು ಭಾಷಾ ಕವಿಯಿತ್ರಿ, ಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಆಯ್ಕೆಯಾಗಿದ್ದಾರೆ.
ಪುರಸ್ಕಾರವು ಪ್ರಶಸ್ತಿ ಫಲಕ ಹಾಗೂ 50,000ರೂ. ನಗದು ಬಹುಮಾನವನ್ನು ಒಳಗೊಂಡಿದೆ. ಇದೇ ಡಿ.3ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಡೆಯಲಿರುವ ಕನಕ ಜಯಂತಿ ಆಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯ ಕಾರ್ಯದರ್ಶಿ ಕೆ.ಎಚ್.ಚೆನ್ನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story