ಅಹ್ಮದ್ ಪಟೇಲ್ ನಿಧನಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂತಾಪ
ಉಡುಪಿ, ನ.25: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿದಿದ್ದ ನಿಷ್ಕಳಂಕ ನೇತಾರ ಅಹ್ಮದ್ ಪಟೇಲ್ರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು ಅಗಲಿದ ಹಿರಿಯ ಚೇತನಕ್ಕೆ ನುಡಿ ನಮನ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ನ ತುರ್ತು ಸಂತಾಪ ಸಭೆಯಲ್ಲಿ ಅವರು ಮಾತನಾಡಿದರು. ಅಹ್ಮದ್ ಪಟೇಲ್ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಪಕ್ಷಕ್ಕಾಗಿ ಹಗಲಿರುಳು ದುಡಿಯುವುದರೊಂದಿಗೆ ಸೋನಿಯಾ ಗಾಂಧಿ ಅವರಿಗೆ ದೀರ್ಘಕಾಲ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಬಿಕ್ಕಟ್ಟಿನ ಸಂದರ್ಭದಲ್ಲಿ ಪಕ್ಷವನ್ನು ಸಂಕಷ್ಟದಿಂದ ಪಾರುಮಾಡಿದ್ದರು ಎಂದರು.
ಸಂತಾಪ ಸಭೆಯಲ್ಲಿ ವೆರೋನಿಕಾ ಕರ್ನೇಲಿಯೋ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಜ್ಯೋತಿ ಹೆಬ್ಬಾರ್, ವೈ.ಸುಕುಮಾರ್, ಕೀರ್ತಿ ಶೆಟ್ಟಿ, ಹಬೀಬ್ ಆಲಿ, ಸತೀಶ್ ಅಮೀನ್ ಪಡುಕೆರೆ, ರೋಶನಿ ಒಲಿವರ್, ಹರೀಶ್ ಶೆಟ್ಟಿ ಪಾಂಗಾಳ, ಪೀರು ಸಾಹೇಬ್, ಉದ್ಯಾವರ ನಾಗೇಶ್ಕುಮಾರ್, ಸೌರಭ್ ಬಲ್ಲಾಳ್, ರಮೇಶ್ ಕಾಂಚನ್, ಜನಾರ್ದನ ಭಂಡಾರ್ಕಾರ್, ಮೀನಾಕ್ಷಿ ಮಾಧವ ಬನ್ನಂಜೆ, ಅಮೃತಾ ಕೃಷ್ಣಮೂರ್ತಿ, ಸಲೀನ್ ಕರ್ಕಡ, ಜಯ ಪೂಜಾರಿ ಬೈಲೂರು, ಯುವರಾಜ್, ಗಣೇಶ್ ನೆರ್ಗಿ, ಪ್ರಶಾಂತ್ ಪೂಜಾರಿ, ಉಪೇಂದ್ರ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು.