ಡಿ.3ಕ್ಕೆ ಎಂಜಿಎಂ ಕಾಲೇಜಿನ ಕನಕ ಜಯಂತಿ
ಉಡುಪಿ, ನ.28: ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಹಾಗೂ ಮಣಿಪಾಲ ಅಕಾಡೆು ಅಫ್ ಹೈಯರ್ ಎಜ್ಯುಕೇಶನ್ ಇದರ ಆಶ್ರಯದಲ್ಲಿ ಸಂತ ಕನಕದಾಸ ಜಯಂತಿಯನ್ನು ಡಿ.3ರ ಗುರುವಾರ ಅಪರಾಹ್ನ 3:15ಕ್ಕೆ ಎಂಜಿಎಂ ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಶಿವಮೊಗ್ಗದ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರಜ್ಞರಾದ ಡಾ. ಎಸ್.ಜಿ. ಸಾಮಕ್ ‘ಬಾಡಾ ಉತ್ಖನನದಲ್ಲಿ ಕಂಡುಬಂದ ಕನಕದಾಸರ ನೆಲೆ’ಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ನಿವೃತ್ತ ಪ್ರಾಂಶುಪಾಲ ಪ್ರೊ.ಮೇಟಿ ಮುದಿ ಯಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ನಾಯಕ್ ಅಧ್ಯಕ್ಷತೆ ವಹಿಸಲಿರುವರು.
ಇದೇ ಸಂದರ್ಭದಲ್ಲಿ ದಿವ್ಯಶ್ರೀ ಮಣಿಪಾಲ ಅವರಿಂದ ಕನಕದಾಸರ ಗೀತೆಗಳ ಗಾಯನ ನಡೆಯಲಿದೆ ಎಂದು ಕೇಂದ್ರದ ಸಂಯೋಜಕ ಪ್ರೊ. ವರದೇಶ್ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story