ಮಾಣಿ: ರಸ್ತೆಗೆ ಉರುಳಿದ ಲಾರಿ; ಚಾಲಕ ಪಾರು
ವಿಟ್ಲ, ಡಿ.1: ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಲಾರಿ ಚಾಲಕ ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಟಯರ್ ಗಳನ್ನು ಹೇರಿಕೊಂಡು ಬರುತ್ತಿದ್ದ ಈ ಲಾರಿ ಮುಂಜಾವ 4:30 ಸುಮಾರಿಗೆ ಬುಡೋಳಿ ಸಮೀಪ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿದ ಬಿದ್ದಿದೆ ಎನ್ನಲಾಗಿದೆ.
ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.
Next Story