ಮಂಗಳೂರು--ಶ್ರವಣಬೆಳಗೊಳ-ಬೆಂಗಳೂರು ರೈಲಿಗೆ ಮತ್ತೆ ಚಾಲನೆ
ಮಂಗಳೂರು, ಡಿ.2: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬಹುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಕೊರೋನ ಕಾರಣದಿಂದ ಈ ರೈಲು ರದ್ದಾಗಿತ್ತು. ಆದರೆ ಕರಾವಳಿಯ ಪ್ರಯಾಣಿಕರು ಈ ರೈಲಿನ ಮೂಲಕ ಬೆಂಗಳೂರನ್ನು ಸಂಪರ್ಕಿಸಲು ಸುಲಭ ಸಾಧ್ಯವಾಗಿರುವುದರಿಂದ ಎರಡು ಜಿಲ್ಲೆಗಳಲ್ಲಿ ವಾಸಿಸುವ ಕರಾವಳಿಗರಿಗೆ ರೈಲಿನ ಅವಶ್ಯಕತೆಯನ್ನು ಮನಗಂಡು ರೈಲ್ವೆ ಸಚಿವರು, ಅಧಿಕಾರಿಗಳೊಂದಿಗೆ ಸಂವಹನ ನಡೆಸಿ ಮತ್ತೆ ರೈಲು ಸಂಚರಿಸುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Next Story