ಹಲ್ಲೆ ಆರೋಪ: ವಿಟ್ಲ ಠಾಣೆಯಲ್ಲಿ ದೂರು ದಾಖಲು
ಬಂಟ್ವಾಳ : ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿರುವ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ ಪಡ್ನೂರು ಗ್ರಾಮದ ಕಡಂಬು ಸುರಂಗದಮೂಲೆ ನಿವಾಸಿ ಚಿದಾನಂದ ಹಲ್ಲೆಗೊಳಗಾಗಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಟ್ಲ ಕಸಬ ಗ್ರಾಮದ ಕಲಾಸಿಪಾಳ್ಯ ಎಂಬಲ್ಲಿ ಜಯ ಕೊಟ್ಟಾರಿ ಎಂಬಾತನು ಚಿದಾನಂದ ಎಂಬವರಿಗೆ ಅವಾಚ್ಯ ಶಬ್ದಗಳಿಂದ ಬೈದು, ದಾಳಿ ನಡೆಸಿದ್ದಾನೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
ಜಯ ಕೊಟ್ಟಾರಿ ಮತ್ತು ಚಿದಾನಂದ ಇಬ್ಬರು ಪರಿಚಯಸ್ಥರಾಗಿದ್ದು ನಿನ್ನೆ ಪಾಳ್ಯದಿಂದ ಕೆಲಸ ಮುಗಿಸಿ ಮನೆಗೆ ತೆರಳುವಾಗ ಏಕಾಏಕಿಯಾಗಿ ಜಯ ಕೊಟ್ಟಾರಿ, ಚಿದಾನಂದ ಅವರನ್ನು ಅವಾಚ್ಯ ಶಬ್ದಗಳಿಂದ ಬೈದು, ದಾಳಿ ನಡೆಸಿ, ನಿನ್ನನ್ನು ಜೀವ ಸಹಿತ ಬಿಡಲಾರೆ ಎಂದು ಬೆದರಿಕೆ ಹಾಕಿ ಜಯ ಕೊಟ್ಟಾರಿ ಸ್ಥಳದಿಂದ ಪರಾರಿಯಾಗಿದ್ದಾನೆ ದೂರಿನಲ್ಲಿ ವಿವರಿಸಲಾಗಿದೆ.
ಹಲ್ಲೆಯಿಂದ ಗಾಯಗೊಂಡ ಚಿದಾನಂದ ರನ್ನು ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.