ಡಿ.6ರಂದು ಕಗ್ಗತ್ತಲ ದಿನಾಚರಣೆ
ಉಡುಪಿ, ಡಿ.6: ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ, ಮಾನವತಾ ವಾದಿ ಬಾಬಾ ಸಾಹೇಬ್ ಅಂಬೇಡ್ಕರ್ರವರ 64ನೆ ಪರಿನಿಬ್ಬಾಣ ದಿನದ ಅಂಗವಾಗಿ ಡಿ.6ರಂದು ಕಗ್ಗತ್ತಲಲ್ಲಿ ಸಂವಿಧಾನ ಎಂಬ ಘೋಷವಾಕ್ಯದೊಂದಿಗೆ ಕಗ್ಗತ್ತಲ ದಿನ ಆಚರಿಸಲು ನಿರ್ಧರಿಸಲಾಗಿದೆ.
ಸಂಜೆ 5-30ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ಬೋರ್ಡ್ ಹೈಸ್ಕೂಲ್ ವರೆಗೆ ಮೇಣದ ಬತ್ತಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story