ಕಾರು ಢಿಕ್ಕಿ: ಪಾದಾಚಾರಿ ಮೃತ್ಯು
ಶಂಕರನಾರಾಯಣ, ಡಿ.17: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.16ರಂದು ಸಂಜೆ ವೇಳೆ ಅಲ್ಬಾಡಿ ಗ್ರಾಮದ 9 ನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ.
ಮೃತರನ್ನು ಅಲ್ಬಾಡಿ ಗ್ರಾಮದ ತೋನ್ನಾಸೆ ನಿವಾಸಿಮಹಾಬಲ ಆಚಾರ್ಯ (72) ಎಂದು ಗುರುತಿಸಲಾಗಿದೆ. ಸೋಮೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಕಾರು ಮಣ್ಣು ರಸ್ತೆಯಲ್ಲಿ ಹಾಲಾಡಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಮಹಾಬಲ ಆಚಾರ್ಯರಿಗೆ ಹಿಂದಿನಿಂದ ಢಿಕ್ಕಿ ಹೊಡೆ ಯಿತ್ತೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಶಂಕರನಾರಾ ಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story