ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಡುಗೆ
ಮಣಿಪಾಲ, ಜ.6: ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಉತ್ತಮ ಗುಣಮಟ್ಟದ ಜೆರಾಕ್ಸ್ ಕಮ್ ಪ್ರಿಂಟರ್ನ್ನು ಕೊಡುಗೆಯಾಗಿ ನೀಡಲಾಯಿತು.
ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಹಾಗೂ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರೂ ಆಗಿರುವ ಜಯಕರ ಶೆಟ್ಟಿ ಇಂದ್ರಾಳಿ ಜೆರಾಕ್ಸ್ ಕಮ್ ಪ್ರಿಂಟರ್ನ್ನು ಕೇಂದ್ರಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಕಲ್ಪನಾ ಸುಧಾ, ಉಡುಪಿ ತಾಲ್ಲೂಕು ಅರೋಗ್ಯಧಿಕಾರಿ ಡಾ.ನಾಗರತ್ನ, ವೈದ್ಯಾಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Next Story