ಫೆ.7: ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನ
ಪುತ್ತೂರು : ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ವತಿಯಿಂದ ಫೆ.27ರಂದು ಪುತ್ತೂರು ತಾಲೂಕು 20ನೆಯ ಕನ್ನಡ ಸಾಹಿತ್ಯ ಸಮ್ಮೇಳವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಕನ್ನಡ ನಾಡು ನುಡಿಗೆ ಚ್ಯುತಿ ಬಾರದಂತೆ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಸರಳವಾಗಿ ಸಾಹಿತ್ಯ ಸಮ್ಮೇಳ ಆಚರಿಸಲಾಗುವುದು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರಾ ಮತ್ತು ಪುತ್ತೂರು ತಾಲೂಕು ಅಧ್ಯಕ್ಷ ಬಿ. ಐತ್ತಪಪ್ಪ ನಾಯ್ಕ್ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story