ಮಂಗಳೂರು : ವಿಹಾರಕ್ಕೆ ಬಂದಿದ್ದ ಪ್ರವಾಸಿಗರ ಕಾರು ಚಾಲಕ ಸಮುದ್ರ ಪಾಲು
ಉಳ್ಳಾಲ : ವಿಹಾರಕ್ಕೆಂದು ಬೆಂಗಳೂರು ಕಡೆಯಿಂದ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ಗೆ ಬಂದಿದ್ದ ಪ್ರವಾಸಿಗರ ಕಾರು ಚಾಲಕ ಸಮುದ್ರ ಪಾಲಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಮ್ಮರ್ ಸ್ಯಾಂಡ್ ಬೀಚ್ ಬಳಿ ಶುಕ್ರವಾರ ನಡೆದಿದೆ.
ಬೆಂಗಳೂರು ಮೂಲದ ನಿವಾಸಿ ನಾಗರಾಜ್ (30) ಮೃತರು ಎಂದು ಗುರುತಿಸಲಾಗಿದೆ.
ನಾಗರಾಜ ಟ್ಯಾಕ್ಸಿ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಇವರು ಬೆಂಗಳೂರು ನಿಂದ ಪ್ರವಾಸಿಗರನ್ನು ಸಮ್ಮರ್ ಸ್ಯಾಂಡ್ ಬೀಚ್ ಗೆ ಕರೆದುಕೊಂಡು ಬಂದಿದ್ದರು. ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ದೂರಲಾಗಿದೆ.
ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ನಾಗರಾಜ್ ಕುಟುಂಬಕ್ಕೆ ಆಧಾರಸ್ತಂಭವಾಗಿದ್ದರು ಎಂದು ತಿಳಿದುಬಂದಿದೆ.
Next Story