ಜ.19: ಉಡುಪಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ
ಉಡುಪಿ, ಜ.15: ಉಡುಪಿ ಜಿಲ್ಲಾ ಸವಿತಾ ಸಮಾಜ ಮತ್ತು ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಹಯೋಗದಲ್ಲಿ ಜಿಲ್ಲೆಯ ಕ್ಷೌರಿಕ ವೃತ್ತಿನಿರತ ಸವಿತಾ ಸಮಾಜದಿಂದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಸವಿತಾ ಸಮ್ಮಿಲನವನ್ನು ಜ.19ರಂದು ಕುಂದಾಪುರ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಹಕಾರಿ ಅಧ್ಯಕ್ಷ ನವೀನ್ಚಂದ್ರ ಭಂಡಾರಿ, ಜಿಲ್ಲೆಯ 16 ತಂಡಗಳು ಭಾಗವಹಿಸಲಿದ್ದು, ವಿಜೇತ ತಂಡಕ್ಕೆ ಪ್ರಥಮ 15ಸಾವಿರ ರೂ. ನಗದು ಮತ್ತು ಶಾಶ್ವತ ಫಲಕ ಹಾಗೂ ದ್ವಿತೀಯ 10ಸಾವಿರ ರೂ. ನಗದು ಮತ್ತು ಶಾಶ್ವತ ಫಲಕ ನೀಡ ಲಾಗುವುದು ಎಂದರು.
ಬೆಳಗ್ಗೆ 8.30ಕ್ಕೆ ಸವಿತಾ ಸಮಾಜ ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ ಮತ್ತು ಸಹಕಾರಿ ಸ್ಥಾಪಕ ನಿರ್ದೇಶಕ ಕಟಪಾಡಿ ಕೇಶವ ಭಂಡಾರಿ ಉದ್ಘಾಟಿಸಲಿರುವರು. ಸಂಜೆ 5ಗಂಟೆಗೆ ನಡೆಯುವ ಸಮಾರೋಪ ಸಮಾರಂಭ ದಲ್ಲಿ ವಿಜೇತ ತಂಡಗಳಿಗೆ ಬಾರಕೂರು ಕಚ್ಚೂರು ಶ್ರೀನಾಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್ ಭಂಡಾರಿ ಬಹುಮಾನ ವಿತರಿಸಲಿ ದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ವಿಶ್ವನಾಥ ಭಂಡಾರಿ, ಗೌರವಾಧ್ಯಕ್ಷ ಗೋವಿಂದ ಭಂಡಾರಿ, ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು, ಕೋಶಾಧಿಕಾರಿ ಶೇಖರ್ ಸಾಲಿಯಾನ್, ಕ್ರೀಡಾ ಕಾರ್ಯದರ್ಶಿ ಮಂಜುನಾಥ್ ಭಂಡಾರಿ ಉಪಸ್ಥಿತರಿದ್ದರು.