ಶ್ರವಣದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
ಉಡುಪಿ, ಜ.15: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಕನಿಷ್ಟ ಎಸೆಸೆಲ್ಸಿ ವ್ಯಾಸಂಗ ಮಾಡಿರುವ ಹಾಗೂ ವೃತ್ತಿಗೆ ಸಂಬಂಧಿಸಿದ ಪ್ರಮಾಣ ಪತ್ರ ಹೊಂದಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ಶ್ರವಣ ದೋಷವುಳ್ಳ ವಿಕಲಚೇತನ ವ್ಯಕ್ತಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜನವರಿ 30ರೊಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ ರಜತಾದ್ರಿ, ಮಣಿಪಾಲ ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story