ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಡಾ. ಅಬ್ದುಲ್ ಶಕೀಲ್ ನೇಮಕ
ಬೆಂಗಳೂರು, ಜ. 15: ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಡಾ. ಅಬ್ದುಲ್ ಶಕೀಲ್ ಮಂಗಳೂರು ಅವರನ್ನು ನೇಮಿಸಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ (ಐ) ಪಕ್ಷ ಎಐಸಿಸಿ ಇದರ ಅಲ್ಪಸಂಖ್ಯಾತ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ನದೀಮ್ ಜಾವೇದ್ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವೈ ಸೈಯದ್ ಅಹಮದ್ ಅವರ ಸಲಹೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಶಾಸಕ ಯು. ಟಿ ಖಾದರ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಶಿಫಾರಾಸಿನ ಮೇರೆಗೆ ನೇಮಕ ಮಾಡಲಾಗಿದೆ.
ಶುಕ್ರವಾರ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ವೈ ಸೈಯದ್ ಅಹಮದ್ ಅವರು ಡಾ.ಶಕೀಲ್ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ, ಅಭಿನಂದಿಸಿ ಪಕ್ಷ ಮತ್ತು ಸಮಾಜ ಸೇವೆಯಲ್ಲಿ ಇನ್ನಷ್ಟು ತೊಡಗಿಸಿಕೊಳ್ಳುಂತೆ ತಿಳಿಸಿದರು.
ಡಾ. ಶಕೀಲ್ ಅವರು ಮಂಗಳೂರು ತಾಲೂಕಿನ ದೇರಳಕಟ್ಟೆ ರೆಂಜಡಿ ನಿವಾಸಿಯಾಗಿದ್ದು, ಸಮಾಜ ಸೇವಕರಾಗಿದ್ದಾರೆ.
Next Story