ಚಿನ್ನಾಭರಣ ಕಳವು: ಆರೋಪಿಗಳಿಬ್ಬರ ಬಂಧನ
ಪುತ್ತೂರು : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿ ಚಿನ್ನಾಭರಣ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ ಪುತ್ತೂರು ನಗರ ಠಾಣೆಯ ಪೊಲೀಸರು ಅವರಿಂದ ಕಳವು ನಡೆಸಿದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ನಿವಾಸಿ ಸಂಶೀರ್ (23) ಮತ್ತು ಕೊಡಿಪ್ಪಾಡಿ ಗ್ರಾಮದ ಓಜಾಲ ನಿವಾಸಿ ಮಹಮ್ಮದ್ ಮುಬಾರಕ್ (26) ಬಂಧಿತ ಆರೋಪಿಗಳು. ಬಂಧಿತರಿಂದ ಕಳವು ನಡೆಸಿದ 2 ಚಿನ್ನದ ಹಾರ ಮತ್ತು 2 ಬಳೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story