ಪ್ರಭಾಕರ ಕಲ್ಯಾಣಿಗೆ ‘ವಿಶ್ವೇಶ್ವರಯ್ಯ ಪ್ರಶಸ್ತಿ’
ಉಡುಪಿ, ಜ.18: ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳು ರಂಗಭೂಮಿ ನಟ, ನಿರ್ದೇಶಕ ಹಾಗೂ ಸಂಘಟಕ ಪೆರ್ಡೂರು ಪ್ರಭಾಕರ ಕಲ್ಯಾಣಿ ಅವರು ರಾಜ್ಯಮಟ್ಟದ ‘ವಿಶ್ವೇಶ್ವರಯ್ಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಭಾರತರತ್ನ ಸರ್. ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಇದರ ವತಿಯಿಂದ ರಾಜ್ಯದ ಸಾಧಕರಿಗೆ ನೀಡಲಾಗುವ ಈ ಪ್ರಶಸ್ತಿಯನ್ನು ಜ.23ರ ಶನಿವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.
ಕರ್ನಾಟಕ ಜಾನಪದ ಪರಿಷತ್ನ ಅಧ್ಯಕ್ಷ ಟಿ.ತಿಮ್ಮೆಗೌಡ, ಮಾಜಿ ಸಚಿವ ಅಮರೇಗೌಡ ಇವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಟ್ರಸ್ಟ್ನ ಅಧ್ಯಕ್ಷ ರಮೇಶ್ ಸುರ್ವೆ ತಿಳಿಸಿದ್ದಾರೆ. ಪ್ರಭಾಕರ ಕಲ್ಯಾಣಿ ಇವರು ಪ್ರಸ್ತುತ ಪೆರ್ಡೂರಿನ ಕೂಡ್ದಿ ಕಲಾವಿದೆರ್ ಹಾಗೂ ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸು ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story