ಉಡುಪಿ: ಜ. 25ಕ್ಕೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ
ಉಡುಪಿ, ಜ.20: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಮಣಿಪಾಲ ವತಿ ಯಿಂದ ನೀಡಲಾಗುವ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ-2020ನ್ನು ಶಿಕ್ಷಕಿ ಹಾಗೂ ಬರಹಗಾರ್ತಿ ಅಕ್ಷತಾ ಕೃಷ್ಣಮೂರ್ತಿ ಅವರಿಗೆ ಜ.25ರ ಬೆಳಗ್ಗೆ 10:15ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪ ದಲ್ಲಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ವಿದ್ವಾಂಸ ಡಾ. ಕೆ.ಪಿ.ರಾವ್ ವಹಿಸಲಿದ್ದು, ಖ್ಯಾತ ವಿಮರ್ಶಕ ಪ್ರೊ. ಮುರಲೀಧರ ಉಪಾಧ್ಯ ಹಿರಿಯಡ್ಕ ಅಭಿನಂದನಾ ಭಾಷಣ ಮಾಡಲಿದ್ದಾರೆ. ಡಾ. ಬಿ. ಜನಾರ್ದನ ಭಟ್ ಅವರು ‘ದಕ್ಷಿಣ ಕನ್ನಡದ ಕಾವ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಡೆಂಗೋಡ್ಲು ಕುಟುಂಬದ ಕೆ. ಈಶ್ವರ ಭಟ್ ಹಾಗೂ ಡಾ. ಕೆ.ಎಸ್.ಭಟ್ ಉಪಸ್ಥಿತರಿರುವರು ಎಂದು ಗೋವಿಂದ ಪೈ ಸಂಶೋಧನ ಕೇಂದ್ರ ದ ಸಂಯೋಜಕ ಪ್ರೊ.ವರದೇಶ ಹಿರೇಗಂಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Next Story