‘ಉದ್ಧವ್ ಉದ್ಧಟತನಕ್ಕೆ ಮಹಾಜನ ಆಯೋಗ ವರದಿ ಅನುಷ್ಠಾನವೇ ಪರಿಹಾರ’
ಮಂಗಳೂರು, ಜ.20: ಕೇಂದ್ರ ಸರಕಾರ ತಕ್ಷಣವೇ ಮಹಾಜನ ಆಯೋಗದ ವರದಿಯನ್ನು ಜಾರಿಗೊಳಿಸುವುದೊಂದೇ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯ ಉದ್ಧಟತನದ ಹಾಗೂ ವಿಕೃತ ಧೋರಣೆಗಳಿಗೆ ಪರಿಹಾರ ಎಂಬುದಾಗಿ ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರವಾರದಿಂದ ಬೆಳಗಾವಿವರೆಗಿನ ಪ್ರದೇಶವನ್ನು ಮಹಾರಾಷ್ಟ್ರ ವಶಪಡಿಸಿಕೊಳ್ಳಲಿದೆ ಎನ್ನುವ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರ ಮುಖ್ಯಮಂತ್ರಿ ಕರ್ನಾಟಕದ ಮುಗ್ಧ ಜನರ ಭಾವನೆಗಳನ್ನು ಕೆರಳಿಸಿದ್ದಾರೆ. ಒಂದೇ ರಾಷ್ಟ್ರವೆಂಬ ಒಕ್ಕೂಟದಲ್ಲಿ ಹಲವು ಭಾಷೆ ಹಾಗೂ ಸಂಸ್ಕೃತಿಗಳ ಜನತೆ ಒಟ್ಟಾಗಿ ಬದುಕುತ್ತಿದ್ದಾರೆ. ದೇಶವು ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಸಂದರ್ಭ ಇಂತಹ ಅಸಂಬದ್ಧ ಹೇಳಿಕೆ ನೀಡುವ ಮೂಲಕ ಜನರನ್ನು ರೊಚ್ಚಿಗೆಬ್ಬಿಸುವ ಪ್ರಯತ್ನ ಖಂಡನೀಯ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ಕುಮಾರ್ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story